ಅಸ್ಸಾಂ ಗಣಿ ಟ್ರಾಜಿಡಿ | ಗಣಿಯಲ್ಲಿ ಸಿಲುಕಿರುವ ಕಾರ್ಮಿಕರಲ್ಲಿ ಒಬ್ಬರ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ್ದ ಒಂಬತ್ತು ಕಾರ್ಮಿಕರ ಪೈಕಿ ಓರ್ವನ ಮೃತದೇಹವನ್ನು ರಕ್ಷಣಾ ಕಾರ್ಯಾಚರಣೆಯ ಮೂರನೇ ದಿನವಾದ ಇಂದು ಬುಧವಾರ ಸೇನಾ ಡೈವರ್‌ಗಳು ಹೊರತೆಗೆದಿದ್ದಾರೆ.

ನೌಕಾಪಡೆ, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿಯ ತಂಡ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿದ್ದರೂ, ಎಂಟು ಮಂದಿ ಬದುಕುಳಿಯುವ ಸಾಧ್ಯತೆಗಳು ಕ್ಷೀಣವಾಗಿದೆ.

ಉಮ್ರಾಂಗ್ಸೊದ 3 ಕಿಲೋ ಪ್ರದೇಶದಲ್ಲಿ ನೆಲೆಗೊಂಡಿರುವ ಕಲ್ಲಿದ್ದಲು ಗಣಿಯಲ್ಲಿ ಸೋಮವಾರ ಹಠಾತ್ ನೀರು ಹರಿದು ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಇಂದು ಮುಳುಗುಗಾರರು ಮೃತದೇಹವನ್ನು ಗಣಿಯಲ್ಲಿ ಪತ್ತೆ ಹಚ್ಚಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!