ಹಲ್ಲೆ ಯತ್ನ ಆರೋಪ: ಸಿಐಡಿ ವಿಚಾರಣೆ ಬಳಿಕ ಸಿಟಿ ರವಿ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಸಿಐಡಿ ಕಚೇರಿಗೆ ಸಿ.ಟಿ.ರವಿ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಐಡಿ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮೇಲಿನ ಹಲ್ಲೆ ಸಂಬಂಧ ಸಭಾಪತಿಗೆ ದೂರು ಕೊಟ್ಟಿದ್ದರು. ಈ ಬಗ್ಗೆ ತನಿಖೆ ನಡೆಸಲು ಸಭಾಪತಿ ಸೂಚಿಸಿದ್ದರು. ಸುವರ್ಣಸೌಧದ ಪಶ್ಚಿಮದ್ವಾರದ ಸಮೀಪ ಹಲ್ಲೆಗೆ ಯತ್ನಿಸಿದ್ದರು. ಪರಿಷತ್ ಸಭಾಂಗಣಕ್ಕೆ ತೆರಳುವಾಗ ಮತ್ತೆ ಹಲ್ಲೆಗೆ ಮುಂದಾಗಿದ್ದರು. ಈ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ದೂರು ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಅದಕ್ಕೆ ಸಂಭವಿಸಿದ ಹಾಗೆ, ವ್ಯಾಪ್ತಿ ನಿರ್ಧಾರ ಮಾಡಿಲ್ಲ. ಅದು ಆಗಬೇಕು. ಅದಕ್ಕೆ ಕರೆದರೂ ಬರುತ್ತೇನೆ. ಈ ಘಟನೆ ನಡೆದಿದ್ದು ಹತ್ತೊಂಬತ್ತೆರಂದು. ಒಂದು ದೂರು ಕೊಟ್ಟಿದ್ದೇವೆ. ಅದಕ್ಕೆ ಇನ್ನೂ ಕೇಸ್ ದಾಖಲು ಮಾಡಿಲ್ಲ ಎಂದು ಹೇಳಿದ್ದಾರೆ.

ಡಿ.19ರಂದು ಸುವರ್ಣಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಲಾಗಿತ್ತು. ಪರಿಷತ್ ಸಭಾಪತಿಗೆ ಮೂವರು ಬಿಜೆಪಿ ಸದಸ್ಯರು ದೂರು ನೀಡಿದ್ದರು. ನಂತರ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆನಂತರ ಹಿರೇಬಾಗೇವಾಡಿ ಠಾಣೆ ಕೇಸ್ ಸಿಐಡಿಗೆ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಿ.ಟಿ.ರವಿಗೆ ಸಿಐಡಿ ನೋಟಿಸ್ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!