ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆ ಯತ್ನ ಆರೋಪ ಕುರಿತಂತೆ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ನೀಡಿ ಆದೇಶಿಸಿತ್ತು. ಇಂದು ಹಲ್ಲೆ ಯತ್ನ ಆರೋಪ ಮಾಡಿದ್ದ ಸಿ.ಟಿ ರವಿ ಅವರು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.
ಡಿ.19, 2024 ರಂದು ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಹಲ್ಲೆ ಮಾಡಿದ್ದರ ಸಂಬಂಧ ಸಭಾಪತಿ ಹೊರಟ್ಟಿ ಅವರನ್ನು ಭೇಟಿಯಾಗಿ ಮೂವರು ಪರಿಷತ್ ಸದಸ್ಯರು ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.
ಇಂದು ಸಿಐಡಿಯಿಂದ ವಿಚಾರಣೆಗೆ ಹಾಜರಾಗುವಂತೆ ಸಿ.ಟಿ ರವಿ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಸಿಐಡಿ ಕಚೇರಿಗೆ ಖುದ್ದು ವಿಚಾರಣೆಗೆ ಪರಿಷತ್ ಸದಸ್ಯ ಸಿ.ಟಿ ರವಿ ಹಾಜರಾದರು.