ಬೆಳಗಾವಿಯಲ್ಲಿ ಮಹಿಳೆಗೆ ಹಲ್ಲೆ: 5 ಸದಸ್ಯರ ಸತ್ಯ ಶೋಧನಾ ಸಮಿತಿ ರಚಿಸಿದ ಜೆಪಿ ನಡ್ಡಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯಲ್ಲಿನ ಮಹಿಳೆ (Woman) ಗೆ ಹಲ್ಲೆ ನಡೆಸಿ ಅಮಾನವೀಯ ಘಟನೆ ಕುರಿತಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಈ ಅಮಾನುಷ ಘಟನೆಯನ್ನು ಖಂಡಿಸಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ಘೋರ ಅಪರಾಧಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮಹಿಳೆಯರ ಮೇಲೆ ಇಂತಹ ಘೋರ ಅಪರಾಧಗಳು ನಿಯಮಿತವಾಗಿ ನಡೆಯುತ್ತಿವೆ. ಇಂತಹ ಅಪರಾಧಗಳನ್ನು ದೇಶದ ಎಲ್ಲೆಡೆ ಕಾಂಗ್ರೆಸ್ ಸರ್ಕಾರ ತಡೆಗಟ್ಟುವಲ್ಲಿ ತನ್ನ ಬೇಜವಾಬ್ದಾರಿಯನ್ನು ತೋರಿಸಿದೆ ಎಂದು ಜೆ.ಪಿ.ನಡ್ಡಾ ವಾಗ್ದಾಳಿ ಮಾಡಿದ್ದಾರೆ.

ಸಮಿತಿಯಲ್ಲಿ , ಸಂಸದೆ ಅಪ್ರಜಿತಾ ಸಾರಂಗಿ, ಸಂಸದೆ ಸುನೀತಾ ದುಗ್ಗಲ್, ಸಂಸದೆ ಲಾಕೆಟ್ ಚಟರ್ಜಿ, ಸಂಸದೆ ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಇದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!