ಹೊಸ ದಿಗಂತ ವರದಿ, ಕಲಬುರಗಿ:
ಕಲಬುರಗಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ವಿಧಾನಸಭೆ ಸಭಾಪತಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಬಿಜೆಪಿ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು.
ನವೆಂಬರ್ 30 ರಂದು ನಗರದ ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿರುವ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ವಿಷಯದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಆಗಮಿಸಿದ ಕಾಗೇರಿ ಅವರು ಜಿಲ್ಲೆಯ ಸುಪ್ರಸಿದ್ಧ ಅಫಜಲಪುರ ತಾಲೂಕಿನ ಗಾಣಗಾಪುರಿನ ದತ್ತಾತ್ರೇಯ ಸ್ವಾಮಿ ದರಶನ ಪಡೆಯಲು ತೆರಳಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಶಿವರಾಜ್ ಪಾಟೀಲ್, ದಯಾಘನ್ ಧಾರವಾಡ್ಕರ್, ಜಗನ್ನಾಥ ಮಾಲಿ ಪಾಟೀಲ್, ಶಂಭು ತುಕ್ಕೊಜಿ, ರಾಘವೇಂದ್ರ ಕುಲ್ಕರ್ಣಿ, ಅವ್ವಣ್ಣ ಮ್ಯಾಕೇರಿ ಸೇರಿದಂತೆ ಪಕ್ಷದ ಮುಖಂಡರು, ಗಣ್ಯರು ಜೊತೆಗಿದ್ದರು.