ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಅವರ ಪುತ್ರಿ ಡಾ. ರಾಜನಂದಿನಿ ಕಾಂಗ್ರೆಸ್ ನಿಂದ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಅವರ ಪುತ್ರಿ ಡಾ. ರಾಜನಂದಿನಿ ಇಂದು ಅರ್ಜಿ ಸಲ್ಲಿಸಿದ್ದಾರೆ.
ಕಾಗೋಡು ತಿಮ್ಮಪ್ಪ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಒಬ್ಬ ಹಿರಿಯ ರಾಜಕಾರಣಿ. ಹಲವು ಬಾರಿ ಶಾಸಕರಾಗಿ, ಸಚಿವರಾಗಿ ಮತ್ತು ವಿಧಾನಸಭಾಧ್ಯಕ್ಷರೂ ಆಗಿ ಕಾರ್ಯ ನಿರ್ವಹಿಸಿದ್ದಾರೆ.
ಕಾಗೋಡು ತಿಮ್ಮಪ್ಪ ಅವರ ನಡೆಯಿಂದ ಹಲವು ಆಕಾಂಕ್ಷಿಗಳಲ್ಲಿ ಗೊಂದಲ ಉಂಟು ಮಾಡಿದೆ. ಇನ್ನೂ ಕಾಂಗ್ರೆಸ್ ನಲ್ಲಿ ಯಾರಿಗೆ ಟಿಕೆಟ್ ಲಭ್ಯವಾಗಲಿದೆ ಎಂಬ ಕುತೂಹಲ ಮೂಡಿದೆ.