ಹೊಸ ದಿಗಂತ ವರದಿ, ಕಲಬುರಗಿ:
ಸಹಾಯಕ ಆಯುಕ್ತರು ಜಾನುವಾರುಗಳಿಗೆ ಹುಲ್ಲು ಮೇಯಿಸಲು ಕರೆದುಕೊಂಡು ಹೋದ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ನಲ್ಲಿ ನಡೆದಿದೆ.
ರಟಕಲ್ ಗ್ರಾಮದಲ್ಲಿರುವ ಶ್ರೀ ರೇವಣಸಿದ್ದೇಶ್ವರ ಗೋಶಾಲೆಯ ಜಾನುವಾರುಗಳನ್ನು ಹುಲ್ಲಿಗಾಗಿ ಮೇಯಿಸಲು ಸೇಡಂ ಉಪವಿಭಾಗದ ಸಹಾಯಕ ಆಯುಕ್ತರಾದ ಆಶಪ್ಪ ಎಚ್ ಅವರು ಕರೆದುಕೊಂಡು ಹೋಗಿದ್ದಾರೆ.
ಗೋಶಾಲೆಯಲ್ಲಿ ಮೇವಿನ ಕೊರತೆಯಿಂದ ಜಾನುವಾರುಗಳು ಸಾವನ್ನಪ್ಪುತ್ತಿವೆಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಕಳೆದ ರಾತ್ರಿ ಗೋಶಾಲೆಗೆ ಭೇಟಿ ನೀಡಿ ವಾಸ್ತವ್ಯ ಹೂಡಿದ್ದರು. ಬೆಳಗ್ಗೆ ಎದ್ದು ಗ್ರಾಮದ ಹೊರವಲಯಕ್ಕೆ ಹುಲ್ಲು ಮೇಯಿಸಲು ಜಾನುವಾರುಗಳನ್ನು ಖುದ್ದಾಗಿ ಕರೆದುಕೊಂಡು ಹೋಗಿದ್ದಾರೆ.