ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಫೋಸಿಸ್ ಸಹ ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣನ್ ಸಹಿತ 16 ಜನರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಐಐಎಸ್ಸಿಯಲ್ಲಿ ದಲಿತ ಪ್ರಾಧ್ಯಾಪಕರ ವಿರುದ್ಧದ ದೌರ್ಜನ್ಯ ಆರೋಪಿಸಿ ಪ್ರಾಧ್ಯಾಪಕ ಸಣ್ಣ ದುರ್ಗಪ್ಪ ಎನ್ನುವರು ಬೆಂಗಳೂರಿನ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಎಫ್ಐಆರ್ಗೆ ಇತ್ತೀಚೆಗೆ ಹೈಕೋರ್ಟ್ ತಡೆ ನೀಡಿತ್ತು.ಇದೀಗ ಹೈಕೋರ್ಟ್, ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಮತ್ತು ಇತರರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಜೊತೆಗೆ ದೂರುದಾರ ದುರ್ಗಪ್ಪ ವಿರುದ್ಧ ಕ್ರಿಮಿನಲ್, ನ್ಯಾಯಾಂಗ ನಿಂದನೆ ಪ್ರಕರಣದ ಅನುಮತಿ ಕೋರಿ ಕ್ರಿಸ್ ಗೋಪಾಲಕೃಷ್ಣನ್ ಮತ್ತು ಇತರ ಅರ್ಜಿದಾರರು ಅಡ್ವೊಕೇಟ್ ಜನರಲ್ ಅವರನ್ನು ಸಂಪರ್ಕಿಸಲು ಹೈಕೋರ್ಟ್ ಅನುಮತಿ ನೀಡಿದೆ.
2014ರಿಂದ ಐಐಎಸ್ಸಿಯಲ್ಲಿ ನನ್ನ ವಿರುದ್ಧ ಜಾತಿ ದೌರ್ಜನ್ಯ ಎಸಗಲಾಗಿದೆ. 2014ರಲ್ಲಿನಕಲಿ ಹನಿಟ್ರ್ಯಾಪ್ ಮೂಲಕ ಕೆಲಸದಿಂದ ವಜಾಗೊಳಿಸಲಾಗಿತ್ತು. ನನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಕೆಲಸದಿಂದ ವಜಾಗೊಳಿಸಿರುವ ಶಿಸ್ತು ಸಮಿತಿಯಲ್ಲಿಸುಪ್ರೀಂಕೋರ್ಟ್ನ ವಿಶಾಖ ಮಾರ್ಗಸೂಚಿಗಳನ್ನು ಪಾಲಿಸಿಲ್ಲ. ದಲಿತ ಎಂಬ ಒಂದೇ ಕಾರಣಕ್ಕೆ ನನ್ನನ್ನು ಕೆಲಸದಿಂದ ವಜಾ ಮಾಡಲಾಗಿದೆ. ಐಐಎಸ್ಸಿಯಲ್ಲಿಜರುಗಿದ ಇತರೆ ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿಇತರರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಸಣ್ಣ ದುರ್ಗಪ್ಪ ಆರೋಪಿಸಿದ್ದರು.