ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

ಹೊಸದಿಗಂತ ವರದಿ ಕಲಬುರಗಿ:

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತು ಅಪ್ತ ಸ್ನೇಹಿತ ಶ್ರೀಕಾಂತ್ ಸುಲೇಗಾವ ಇಬ್ಬರ ಮೇಲೆ ಮಧ್ಯರಾತ್ರಿ ಕಿಡಿಗೇಡಿಗಳು ಬಿಯರ್ ಬಾಟಲ್ ಗಳಿಂದ ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಇಲ್ಲಿನ ಚಿತ್ತಾಪುರ ತಾಲ್ಲೂಕಿನ ಮಾಲಗತಿ ಹೈವ್ ಶಂಕರವಾಡಿ ಕ್ರಾಸ್ ಹತ್ತಿರ ಮಧ್ಯ ರಾತ್ರಿ ಇಬ್ಬರು ಕಲಬುರಗಿಗೆ ಆಗಮಿಸುವ ವೇಳೆ ಕಿಡಿಗೇಡಿಗಳು ಬಿಯರ್ ಬಾಟಲ್ ಗಳಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಲ್ಲಿ ಮಣಿಕಂಠ ರಾಠೋಡ್ ಅವರಿಗೆ ಕಿವಿಯ ಹಿಂದುಗಡೆ ಮತ್ತು ಕೈಗೆ ಗಂಭೀರ ಗಾಯಗಳಾಗಿವೆ, ಶ್ರೀಕಾಂತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಮೆಡಿಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಲ್ಲೆ ನಡೆಸಿದವರ ಗುರುತು ಮತ್ತು ಕಾರಣ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!