ಜಮ್ಮುವಿನಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ: ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‍ನ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್ ‘(TRF) ಹೊತ್ತುಕೊಂಡಿದೆ.

ಉಗ್ರ ಸಂಘಟನೆ ದಾಳಿ ಬಗ್ಗೆ ಸಂದೇಶ ರವಾನಿಸಿದ್ದು, ಇದು ಆರಂಭ, ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ ಮೇಲೆ ಹೆಚ್ಚಿನ ದಾಳಿ ನಡೆಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ.

ಭಯೋತ್ಪಾದಕರ ಪತ್ತೆಗೆ ಭಾರತೀಯ ಸೇನೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದೆ. ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಭಾನುವಾರ (ಜೂ.9) ಮಾತಾ ವೈಷ್ಣೋ ದೇವಿ ದೇಗುಲದ ಕತ್ರಾ ಮಾರ್ಗವಾಗಿ ಶಿವ ಖೋರಿ ದೇಗುಲದಿಂದ ಯಾತ್ರಾರ್ಥಿಗಳು ಬಸ್‍ನಲ್ಲಿ ಹಿಂತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದರು. ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಬಸ್ಸಿನ ಚಾಲಕನಿಗೆ ಬುಲೆಟ್ ತಾಗಿ ವಾಹನ ಕಮರಿಗೆ ಉರುಳಿತ್ತು. ಘಟನೆಯಲ್ಲಿ ಬಸ್ ಕಂಡಕ್ಟರ್ ಮತ್ತು ಚಾಲಕ ಸೇರಿ 9 ಮಂದಿ ಸಾವನ್ನಪ್ಪಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!