ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ (MoS) ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ಕೂಚ್ ಬೆಹಾರ್ನ ಸೆಟಾಯ್ನಲ್ಲಿ ದಾಳಿ ಮಾಡಲಾಗಿದೆ ಎಂದು ಭಾರತೀಯ ಜನತಾ ಪಕ್ಷ ಗುರುವಾರ ಆರೋಪಿಸಿದೆ. ಕೆಲವು ವ್ಯಕ್ತಿಗಳು ಸಚಿವರ ಮೇಲೆ ಕಪ್ಪು ಬಾವುಟ ಪ್ರದರ್ಶಿಸಿದ ನಂತರ ‘ಸಣ್ಣ ಗಲಾಟೆ’ ನಡೆದಿದೆ ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಾಮಾಣಿಕ್ ಇದೆಲ್ಲಾ ಹೇಗೆ ನಡೆಯಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. “ಬಂಗಾಳ ಅಧಿಕಾರಿಗಳು ಕಟ್ಟುನಿಟ್ಟಾಗಿದ್ದರೆ, ಇಷ್ಟು ಜನರು ಹೇಗೆ ಒಟ್ಟುಗೂಡಿದರು? ನನ್ನ ಬೆಂಗಾವಲು ಮಾರ್ಗವನ್ನು ಗುರುತಿಸಿದ ರಾಜ್ಯ ಪೊಲೀಸರೇ ನನಗೆ ಇಷ್ಟು ದೊಡ್ಡ ಬೆದರಿಕೆ ಹೇಗೆ ಸಾಧ್ಯವಾಯಿತು” ಎಂದು ಸಚಿವ ನಿಸಿತ್ ಪ್ರಮಾಣಿಕ್ ಹೇಳಿದ್ದಾರೆ.
ವರದಿಗಳ ಪ್ರಕಾರ, ಬ್ರಹ್ಮೋತ್ತರ್-ಛತ್ರ ಪ್ರದೇಶದಲ್ಲಿ ಪಕ್ಷದ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲು ಸಚಿವರು ಸೀತಾಯಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದರು. ಬಿಜೆಪಿಯ ಪ್ರಕಾರ, ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಹಣಾಹಣಿ ನಂತರ ಆರು ಸಹಚರರು ಗಾಯಗೊಂಡಿದ್ದಾರೆ. ಆದರೆ, ಈ ಆರೋಪವನ್ನು ಟಿಎಂಸಿ ನಿರಾಕರಿಸಿದೆ.
ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ಮತ್ತು ಕಚ್ಚಾ ಬಾಂಬ್ಗಳಿಂದ ದಾಳಿ ನಡೆಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಮತ್ತೊಂದೆಡೆ, ಬಿಜೆಪಿಯ ಆಂತರಿಕ ಕಚ್ಚಾಟದಿಂದ ಈ ಘಟನೆ ನಡೆದಿರಬಹುದು ಎಂದು ಟಿಎಂಸಿ ಹೇಳಿದ್ದು, ಆರೋಪವನ್ನು ತಳ್ಳಿಹಾಕಿದೆ.