ತನಿಖೆ ಮೇಲೆ ಪ್ರಭಾವ ಬೀರಲು ಪ್ರಯತ್ನ: ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎನ್‌ಎಎನ್‌ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಪ್ರಧಾನ ಕಾರ್ಯದರ್ಶಿ ಅಲೋಕ್‌ ಶುಕ್ಲಾ, ಮಾಜಿ ಜಂಟಿ ಕಾರ್ಯದರ್ಶಿ ಅನಿಲ್‌ ಟುಟೇಜಾ ಹಾಗೂ ಅಡ್ವೋಕೇಟ್‌ ಜನರಲ್‌ ಸತೀಶ್‌ ಚಂದ್ರ ವರ್ಮಾ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

೨೦೧೫ರಲ್ಲಿ ನಡೆದ ಈ ಹಗರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ತನಿಖಾ ಬ್ಯೂರೊ (ಇಒಡಬ್ಲ್ಯೂ, ಎಸಿಬಿ) ಹಾಗೂ ಜಾರಿ ನಿರ್ದೇಶನಾಲಯವು (ಇ.ಡಿ) ಈಗಾಗಲೇ ಇಬ್ಬರು ಮಾಜಿ ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿವೆ.

ಶುಕ್ಲಾ ಮತ್ತು ಟುಟೇಜಾ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ವರ್ಮಾ ಅವರ ಮೂಲಕ ತನಿಖೆ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ. ರಾಯಪುರದಲ್ಲಿರುವ ಅವರ ನಿವಾಸಗಳಲ್ಲಿ ಸಿಬಿಐ ಶೋಧ ನಡೆಸಿದ ವೇಳೆ ಇದಕ್ಕೆ ಪೂರಕವಾದ ಸಾಕ್ಷ್ಯಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧವೂ ಕೇಸು ದಾಖಲಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!