ಜೈಲಿನಲ್ಲಿ ನನ್ನ ಪತಿಯನ್ನು ಕೊಲ್ಲಲು ಯತ್ನ: ಸುನಿತಾ ಕೇಜ್ರಿವಾಲ್ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಇನ್ಸುಲಿನ್ ನೀಡಲು ನಿರಾಕರಿಸಲಾಗುತ್ತಿದೆ ಎಂದು ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

ರಾಂಚಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ನ್ಯಾಯ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಅವರು ನನ್ನ ಪ‍ತಿ ಅರವಿಂದ ಕೇಜ್ರಿವಾಲ್‌ರನ್ನು ಕೊಲ್ಲಬೇಕೆಂದಿದ್ದಾರೆ. ಅವರ ಆಹಾರ ತಯಾರಿಯನ್ನು ಕೂಡ ಕ್ಯಾಮೆರಾದಲ್ಲಿ ಚಿತ್ರೀಕರಿಸಲಾಗುತ್ತಿದೆ. ಇನ್ಸುಲಿನ್‌ ನಿರಾಕರಿಸಲಾಗುತ್ತಿದೆ. ನನ್ನ ಪತಿ ಮಧುಮೇಹ ಪೀಡಿತರಾಗಿದ್ದು, 12 ವರ್ಷಗಳಿಂದ ಇನ್ಸುಲಿನ್‌ ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ನಿತ್ಯ 50 ಯೂನಿಟ್‌ ಇನ್ಸುಲಿನ್‌ ಬೇಕಾಗಿದೆ’ ಎಂದರು.

ಜನರ ಪರವಾಗಿ ಸೇವೆ ಮಾಡಿದ್ದಕ್ಕಾಗಿ ನನ್ನ ಪತಿಯನ್ನು ಜೈಲಿಗೆ ಹಾಕಲಾಗಿದೆ. ಅವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಹೇಳಿದರು.

ಬಿಜೆಪಿಯ ಏಕಾಧಿ‍ಪತ್ಯದ ವಿರುದ್ಧ ಹೋರಾಡಿ ನಾವು ಗೆಲುವು ಸಾಧಿಸಲಿದ್ದೇವೆ. ಅರವಿಂದ ಕೇಜ್ರಿವಾಲ್ ಹಾಗೂ ಹೇಮಂತ್ ಸೊರೇನ್‌ ಜೈಲಿನಿಂದ ಹೊರಬರಲಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!