ಕೃಷ್ಣ ಮೃಗದ ಚರ್ಮ ಮಾರಾಟ ಯತ್ನ: ಇಬ್ಬರ ಬಂಧನ

ಹೊಸದಿಗಂತ ವರದಿ, ಮಡಿಕೇರಿ:

ಕೃಷ್ಣ ಮೃಗದ ಚರ್ಮವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.
ಚಿತ್ರದುರ್ಗದ ನಿವಾಸಿಗಳಾದ ನರಸಿಂಹ ಮೂರ್ತಿ ಹಾಗೂ ನಾಗರಾಜು ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.
ನ.30ರಂದು ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕೃಷ್ಣ ಮೃಗದ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದರು.
ಆರೋಪಿಗಳಿಂದ ಒಂದು ಕೃಷ್ಣ ಮೃಗದ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‍ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ.ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ, ಸಿಬ್ಬಂದಿಗಳಾದ ಶೇಖರ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಹಾಗೂ ಮಂಜುನಾಥ ಪಾಲ್ಗೊಂಡಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!