ಹೊಸದಿಗಂತ ವರದಿ, ಮಡಿಕೇರಿ:
ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವೀರಾಜಪೇಟೆ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ.
ಬೆಂಗಳೂರಿನ ಸಾರೆಪಾಳ್ಯದ ನಿವಾಸಿಗಳಾದ ಪಾಂಡಿಯನ್ ಎಂ. ಹಾಗೂ ಶೋಭನ್ ಎಂಬವರನ್ನು ವೀರಾಜಪೇಟೆಯ ಚಿಕ್ಕಪೇಟೆಯ ಬಳಿ ಬಂಧಿಸಿ, ಅವರ ಬಳಿಯಲ್ಲಿದ್ದ ನಕ್ಷತ್ರ ಆಮೆಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ವನ್ಯಜೀವಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ಚಂದ್ರ ಅವರ ನಿರ್ದೇಶನದ ಮೇರೆಗೆ ಸಿ.ಐ.ಡಿ. ಪೊಲೀಸ್ ಅರಣ್ಯ ಘಟಕ ಮಡಿಕೇರಿಯ ಪೊಲೀಸ್ ಅಧೀಕ್ಷಕ ಕೆ.ಬಿ.ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳದ ಪ್ರಭಾರ ಆರಕ್ಷಕ ಉಪನಿರೀಕ್ಷಕಿ ಸವಿ ಸಿ.ಯು., ಸಿಬ್ಬಂದಿಗಳಾದ ಟಿ.ಪಿ. ಮಂಜುನಾಥ್, ಕೆ.ಎಸ್. ದೇವಯ್ಯ, ಸಿ.ಬಿ.ಬೀನಾ, ಕುಶ, ಎಸ್.ಎಂ.ಯೋಗೇಶ್, ಪಿ.ಯು.ಮುನೀರ್, ಆರ್.ನಂದ ಕುಮಾರ್ ಭಾಗವಹಿಸಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ