ಕಾರಿನಲ್ಲಿದ್ದ ಹಣ ಎಗರಿಸಲು ಯತ್ನ: ಸಾರ್ವಜನಿಕರಿಂದ ಕಳ್ಳನಿಗೆ ಬಿತ್ತು ಗೂಸಾ

ಹೊಸದಿಗಂತ ವರದಿ,ಮಂಡ್ಯ :

ಕಾರಿನಲ್ಲಿದ್ದ 7 ಲಕ್ಷ ರೂ. ನಗದು ಹಣವನ್ನು ಎಗರಿಸಲು ಹೋದ ಕಳ್ಳನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ನಗರದ ಹೊರ ವಲಯದ ಅಮರಾವತಿ ಹೊಟೇಲ್ ಬಳಿ ನಡೆದಿದೆ.

ಆಂಧ್ರ ಮೂಲದ ವ್ಯಕ್ತಿಯೊಬ್ಬ (ಹೆಸರು ತಿಳಿದುಬಂದಿಲ್ಲ) ಸಾರ್ವಜನಿಕರ ಕೈ ಸಿಕ್ಕಿಬಿದ್ದಿದ್ದು, ಆತನನ್ನು ಸಾರ್ವಜನಿಕರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕಲ್ಲಹಳ್ಳಿ ಬಡಾವಣೆಯ ಮಧು ಎಂಬುವರು ನಗರ ಕೆನರಾ ಬ್ಯಾಂಕಿನಲ್ಲಿ 7 ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಡು ತಮ್ಮ ಬ್ರೀಜಾ (ಕೆ.ಎ. 11-ಎಂ. 9141) ಕಾರಿನಲ್ಲಿ ಅಮರಾವತಿ ಹೊಟೇಲ್ ಬಳಿ ತಮ್ಮ ಸ್ನೇಹಿತರನ್ನು ಭೇಟಿ ಮಾಡಲು ಆಗಮಿಸಿದ್ದರು.

ಕಾರನ್ನು ಹೊಟೇಲ್ ಹಿಂಭಾಗದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಸ್ನೇಹಿತರನ್ನು ಭೇಟಿ ಮಾಡಲು ತೆರಳಿದ್ದರು. ಸ್ನೇಹಿತರನ್ನು ಭೇಟಿ ಮಾಡಿ ವಾಪಸ್ಸು ಬರುವಷ್ಟರಲ್ಲಿ ಆರೋಪಿ ಕಾರಿನ ಚಾಲಕರ ಕಿಟಕಿಯ ಗಾಜನ್ನು ಒಡೆದು ಕಾರಿನೊಳಗೆ ನುಗ್ಗಿ ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಆದರೆ ಹಣ ಆತನ ಕೈಗೆ ಸಿಗಲಿಲ್ಲ.

ಮದು ಅವರು ವಾಪಸ್ಸು ಬಂದು ಕಾರಿನೊಳಗೆ ಹುಡುಕುತ್ತಿದ್ದ ಕಳ್ಳನನ್ನು ಕಂಡು ಆತನನ್ನ ಹಿಡಿಹಿರಿ ಎಂದು ಕಿರುಚಿದ್ದಾರೆ. ತಕ್ಷಣ ಎಚ್ಚೆತ್ತ ಕಳ್ಳ ಅಲ್ಲಿಂದ ಓಟ ಕೀಳಲು ಪ್ರಾರಂಭಿಸಿದ್ದ ಹೊಟೇಲ್‌ನ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಲು ಯತ್ನಿಸಿದ್ದ. ಮಧು ಅವರ ಕಿರುಚಾಟ ಆಲಿಸಿದ ಸಾರ್ವಜನಿಕರು ಕಳ್ಳನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!