ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ, ಆರೋಪಿ ಕಾಲಿಗೆ ಗುಂಡು

ಹೊಸದಿಗಂತ ವರದಿ ಶಿವಮೊಗ್ಗ:

ನಗರದಲ್ಲಿ ಮತ್ತೊಮ್ಮೆ ಪೊಲೀಸರು ಗುಂಡಿನ ಸದ್ದು ಮೊಳಗಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಅಸ್ಮಂ ಕಾಲಿಗೆ ಗುಂಡೇಟಿನ ರುಚಿ ತೋರಿಸಿದ್ದಾರೆ.
ಕಳೆದ ವಾರ ನಗರದ ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಶೋಕ್  ಎಂಬುವರ ಮೇಲೆ ವಿನಾ ಕಾರಣ ಹಲ್ಲೆ ನಡೆಸಲಾಗಿತ್ತು. ಹರಿತವಾದ ಆಯುಧದಿಂದ ಕುತ್ತಿಗೆ ಬಳಿ ತೀವ್ರ ಗಾಯ ಮಾಡಲಾಗಿತ್ತು. ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು. ಈ ಸಂಬಂಧ ಶುಕ್ರವಾರ ಆರೋಪಿ ಅಸ್ಮಂ ಎಂಬಾತನನ್ನು ಬಂಸಲಾಗಿತ್ತು.

ಈತ ನೀಡಿದ ಸುಳಿವಿನ ಮೇರೆಗೆ ಇನ್ನೋರ್ವ ಆರೋಪಿ ಅಸ್ಲಂ ಬಂಧ‘ನಕ್ಕೆ ಶನಿವಾರ ಬೆಳಿಗ್ಗೆ ಪೊಲೀಸರು ತೆರಳಿದ್ದರು. ಪುರಲೆಯ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಆರೋಪಿ ಅಡಗಿಕೊಂಡಿರುವ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಆತನನ್ನು ವಶಕ್ಕೆ ಪಡೆಯಲು ಮುದಾದಾಗ ಸಿಬ್ಬಂದಿ ರಮೇಶ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ತಕ್ಷಣ ದೊಡ್ಡಪೇಟೆ ಪಿಎಸ್‌ಐ ವಸಂತ್ ತಮ್ಮ ಪಿಸ್ತೂಲಿನಿಂದ ಅಸ್ಲಂ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗಾಯಾಳು ಅಸ್ಲಂ ಮತ್ತು ಸಿಬ್ಬಂದಿ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಪಿ ಮಿಥುನ್‌ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ರಮೇಶ್ ಆರೋಗ್ಯ ವಿಚಾರಿಸಿದರು. ತಮ್ಮ ಸಿಬ್ಬಂದಿ ರಕ್ಷಣೆಗೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ.  ಅಸ್ಲಂ ಮೇಲೆ ಕೊಲೆ ಯತ್ನ ಪ್ರಕರಣಗಳು ಸೇರಿ 09 ಪ್ರಕರಣಗಳಿವೆ. ಇದು 10ನೇ ಪ್ರಕರಣ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!