ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ: ಮೂವರು ಅರೆಸ್ಟ್

ಹೊಸದಿಗಂತ ವರದಿ,ಶಿವಮೊಗ್ಗ:

ಸಾಗರದಲ್ಲಿ ಬಜರಂಗದ ಕಾರ್ಯಕರ್ತ ಸುನೀಲ್ ಮೇಲೆ ನಡೆದಿರುವ ಹಲ್ಲೆ ಘಟನೆಗೆ ಸಂಬಂಸಿ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ತಿಳಿಸಿದರು.
ತಮ್ಮ ಕಚೇರಿಯಲ್ಲಿ ಮಂಗಳವಾರ ಮಾಧ್ಯಮದವರಿಗೆ ಮಾಹಿತಿ ನೀಡಿ, ಪ್ರಕರಣದ ಆರೋಪಿ ಸಮೀರ್, ಆತನ ಜೊತೆಗಿದ್ದ ಇಲಿಯಾನ್ ಹಾಗೂ ಮನ್ಸೂರ್ ಅವರನ್ನು ಬಂಧಿಸಲಾಗಿದೆ. ಘಟನೆ ನಡೆದ ಕೇವಲ 15 ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸಮೀರ್ ಮತ್ತು ಇತರ ಇಬ್ಬರು ಆರೋಪಿಗಳು ಕ್ರಿಕೆಟ್ ಆಡಲು ಬಂದವರು ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು. ಅವರ ಪಾತ್ರ ಏನು ಎಂಬ ಬಗ್ಗೆ ವಿಚಾರಣೆ ಬಳಿಕ ಗೊತ್ತಾಗಲಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!