ಹೊಸದಿಗಂತ ವರದಿ,ಕುಶಾಲನಗರ:
ಚಾಕು ಇರಿದು ಪತ್ನಿಯ ಹತ್ಯೆಗೆ ಯತ್ನಿಸಿದ ಘಟನೆ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂದರನಗರ ಗ್ರಾಮದಲ್ಲಿ ನಡೆದಿದೆ.
ರಾಜೇಶ್ ಎಂಬಾತನೇ ತನ್ನ ಪತ್ನಿ ಜ್ಯೋತಿ ಎಂಬಾಕೆ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿಯಾಗಿದ್ದಾನೆ.
ಕೌಟುಂಬಿಕ ಕಲಹ ತಾರಕ್ಕಕೇರಿದ ಈ ಘಟನೆ ನಡೆದಿದೆ. ಜ್ಯೋತಿಗೆ 9 ಕಡೆ ಇರಿದ ಗಾಯಗಳಾಗಿದ್ದು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಾಜೇಶನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.