ಸ್ಥಳ ಮಹಜರು ವೇಳೆ ತಪ್ಪಿಸಲು ಯತ್ನ: ಆರೋಪಿಗೆ ಗುಂಡು ಹೊಡೆದ ಪೊಲೀಸರು

ಹೊಸದಿಗಂತ ವರದಿ, ಮಂಗಳೂರು:

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹೊಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಮಿಸ್ತಾ ಅಲಿಯಾಸ್ ಎಂ.ಡಿ. ಮುಸ್ತಾಕ್ (26) ಗುಂಡೇಟಿಗೆ ಒಳಗಾದ ಆರೋಪಿ. ಆ.೧೯ರಂದು ನಗರ ಹೊರವಲಯದಲ್ಲಿ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಆರೋಪಿಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ಸೋಮವಾರ ನಗರ ಹೊರವಲಯದ ಕಂಬಳ ಎಂಬ ಸ್ಥಳಕ್ಕೆ ಕರೆದೊಯ್ದಿದ್ದರು. ಈ ವೇಳೆ ಆರೋಪಿ ಗ್ರಾಮಾಂತರ ಠಾಣೆಯ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭ ಆರೋಪಿಗೆ ಗುಂಡು ಹೊಡೆದ ಪೊಲೀಸರು, ಆತನನ್ನು ವಶಕ್ಕೆ ಪಡೆದಿದ್ದಾರೆ. ಗಾಯಾಳು ಆರೋಪಿಯನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತೆಗ ದಾಖಲಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!