ಹೊಸದಿಗಂತ ವರದಿ,ಶಿವಮೊಗ್ಗ:
ನಗರದಲ್ಲಿ ಪದೇ ಪದೇ ಅಶಾಂತಿ ಸೃಷ್ಟಿಸುವ ಪ್ರಯತ್ನಗಳು ನಡೆದಿವೆ. ಇಂತಹ ಮತಾಂಧ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಗರದ ಬಿಜೆಪಿ ವತಿಯಿಂದ ಗುರುವಾರ ಜಿಲ್ಲಾ ರಕ್ಷಣಾಧಿಕಾ ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಶಾಂತಿಗೆ ಹೆಸರಾಗಿದೆ. ಆದರೆ ಕಳೆದ ಮೂರು ತಿಂಗಳಿಂದ ಪ್ರಶಾಂತವಾಗಿದ್ದ ಶಿವಮೊಗ್ಗ ನಗರದಲ್ಲಿ ಅನ್ಯಕೋಮಿನ ಕೆಲವು ವ್ಯಕ್ತಿಗಳು ಅಶಾಂತಿ ಸೃಷ್ಠಿಸುವ ಪ್ರಯತ್ನಗಳನ್ನು ಅಲ್ಲಲ್ಲಿ ಮಾಡುತ್ತಿದ್ದಾರೆ. ಹಿಂದೂ ಸಂಘಟನೆ ಯುವಕರ ಮೇಲೆ ಮಾರಣಾಂತಿಕ ಹಲ್ಲೆಗಳು ನಡೆಯುತ್ತಿವೆ. ಇದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ಎಸ್.ಎನ್. ಚನ್ನಬಸಪ್ಪ, ಜ್ಞಾನೇಶ್ವರ್, ನಾಗರಾಜ್, ದೀನದಯಾಳ್, ಬಳ್ಳಕೆರೆ ಸಂತೋಷ್, ರಾಹುಲ್ ಬಿದರೆ, ಸುರೇಖಾ ಮುರಳೀಧರ್, ಪ್ರಭಾ, ರವಿಕುಕಮಾರ್, ಕಿರಣ್, ಶಂಕರ್ ನಾಯಕ್, ಡಿ. ಮೋಹನ್ ರೆಡ್ಡಿ ಮೊದಲಾದವರಿದ್ದರು.