ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಚುನಾವಣೆಗೆ ಕೆಲವೇ ದಿನಗಳಿರುವಾಗ ಬಿಜೆಪಿ ಮತ್ತೊಂದು ಶಾಕ್ ಎದುರಾಗಿದ್ದು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗು ಆಯನೂರು ಮಂಜುನಾಥ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಸದ್ಯದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಬೇಕೆಂಬ ಇಚ್ಛೆ ಇದೆ. ನನ್ನ ನಿಲುವು ಏನೆಂದು ಸ್ಪಷ್ಟವಾಗಿ ಹೇಳಿದ್ದೇನೆ. ನನ್ನ ಆಸೆಯ ಪರವಾಗಿ ಬಿಜೆಪಿ ನನಗೆ ಟಿಕೆಟ್ ನೀಡೋ ಲಕ್ಷಣ ಕಾನಿಸ್ತಿಲ್ಲ. ಈಶ್ವರಪ್ಪನವರೇ ಸ್ಪರ್ಧೆಗೆ ಬರಲಿ. ಈಶ್ವರಪ್ಪ ತನ್ನ ಸ್ಥಾನ ಉಳಿಸಿಕೊಂಡಿಲ್ಲ. ಮಂತ್ರಿ ಸ್ಥಾನ ಬೇಕಾದವರು ಶಾಸಕರ ಸ್ಥಾನಕ್ಕೆ ಸ್ಪರ್ಧಿಸೋದಿಲ್ಲ. ಜಿಲ್ಲಾ ಮಂತ್ರಿಯಾಗಿದ್ದವರು ಸ್ಥಾನಕ್ಕೆ ತಕ್ಕ ಗೌರವ ಉಳಿಸಿಕೊಂಡಿಲ್ಲ ಎಂದಿದ್ದಾರೆ.