ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದ ಆಲ್ ಇಂಡಿಯಾ ಇಮಾಮ್ ಸಂಘಟನೆಯ ಮುಖ್ಯಸ್ಥ ಡಾ. ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ವಿರುದ್ಧ ಫತ್ವಾ ಹೊರಡಿಸಲಾಗಿದೆ .
ಈ ಸಂಬಂಧ ಮಾತನಾಡಿದ ಡಾ. ಇಲ್ಯಾಸಿ, ಫತ್ವಾವನ್ನು ಭಾನುವಾರ ಹೊರಡಿಸಲಾಗಿದೆ ಆದರೆ ರಾಮ ಮಂದಿರದ ಕಾರ್ಯಕ್ರಮಕ್ಕೆ ಭೇಟಿ ನೀಡಿದಾಗಿನಿಂದಲೂ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಇಮಾಮ್ ಹೇಳಿದ್ದಾರೆ.
ಭಾನುವಾರ ಫತ್ವಾ ಹೊರಡಿಸಲಾಗಿದೆ. ಆದರೆ ಜನವರಿ 22 ರ ಸಂಜೆಯಿಂದಲೇ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದು, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ನನ್ನನ್ನು ಪ್ರೀತಿಸುವವರು ಹಾಗೂ ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಪ್ರಾಣಪ್ರತಿಷ್ಠೆ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ತಾನಕ್ಕೆ ಹೋಗಬೇಕು. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ಈ ಹಿನ್ನೆಲೆ, ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ, ಅವರು ಏನು ಬೇಕಾದರೂ ಮಾಡಬಹುದು ಎಂದೂ ಇಮಾಮ್ ಹೇಳಿದರು.
ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಹೋಗುವ ನಿರ್ಧಾರವು ನನ್ನ ಜೀವನದ ಅತ್ಯಂತ ದೊಡ್ಡ ನಿರ್ಧಾರಗಳಲ್ಲಿ ಒಂದಾಗಿದೆ . ನಾನು ಎರಡು ದಿನಗಳ ಕಾಲ ಅದರ ಬಗ್ಗೆ ಯೋಚಿಸಿದೆ. ನಾನು ಪರಸ್ಪರ ಸಾಮರಸ್ಯಕ್ಕಾಗಿ ಅಯೋಧ್ಯೆಗೆ ಹೋಗಲು ನಿರ್ಧರಿಸಿದೆ. ಎಲ್ಲಾ ಸಂತರು ಮತ್ತು ಮಂದಿರ ಟ್ರಸ್ಟ್ ನನ್ನನ್ನು ಹೃದಯದಿಂದ (ಅಯೋಧ್ಯೆಯಲ್ಲಿ) ಸ್ವಾಗತಿಸಿತು. ನನ್ನ ಉದ್ದೇಶವು ಪ್ರೀತಿಯ ಸಂದೇಶವನ್ನು ಹರಡುವುದಾಗಿತ್ತು ಎಂದೂ ಅವರು ಹೇಳಿದರು.
ಆದರೆ ಅಯೋಧ್ಯೆಯಿಂದ ಹಿಂದಿರುಗಿದ ನಂತರ, ನನ್ನ ಮೇಲೆ ನಿಂದನೆ ಮಾಡಲಾಗುತ್ತಿದೆ ಮತ್ತು ಈಗ ನನ್ನ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ. ಮುಖ್ಯ ಇಮಾಮ್ ಆಗಿರುವ ನಾನು ಕಾರ್ಯಕ್ರಮಕ್ಕೆ ಹಾಜರಾಗಬಾರದು ಎಂದು ‘ಫತ್ವಾ’ ಹೇಳಿಕೊಂಡಿದೆ. ಇದು ನನ್ನ ನಡುವೆ ಮತ್ತು ನನ್ನ ಅಲ್ಲಾ ನಡುವೆ ಎಂದು ನಾನು ಹೇಳಲು ಬಯಸುತ್ತೇನೆ. ನನ್ನ ಕೃತ್ಯಕ್ಕೆ ನಾನು ಕ್ಷಮೆಯಾಚಿಸುವುದಿಲ್ಲ ಎಂದೂ ಇಮಾಮ್ ಹೇಳಿದರು.