ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದಲ್ಲಿ ಆಜಾನ್ ವಿವಾದ ಭುಗಿಲೆದ್ದಿದ್ದು, ಶಬ್ಧಮಾಲಿನ್ಯ ರೂಲ್ಸ್ ಪಾಲಿಸದ 301 ಧಾರ್ಮಿಕ ಸ್ಥಳಗಳಿಗೆ ನೋಟಿಸ್ ನೀಡಲಾಗಿದೆ.
ಮಂದಿರ, ಮಸೀದಿ, ಚರ್ಚ್ಗಳಿಗೆ ನೋಟಿಸ್ ನೀಡಲಾಗಿದ್ದು, ಹೈಕೋರ್ಟ್ ಆದೇಶದಂತೆ ಶಬ್ಧಮಾಲಿನ್ಯ ರೂಲ್ಸ್ ಸರಿಯಾಗಿ ಪಾಲಿಸುವಂತೆ ತಾಕೀತು ಮಾಡಲಾಗಿದೆ.
ಇನ್ನು ಬೆಂಗಳೂರು ನಗರದಲ್ಲಿ ಮಾತ್ರ ಈಗಾಗಲೇ 40ಕ್ಕೂ ಹೆಚ್ಚು ಕೇಸ್ ದಾಖಲು ಮಾಡಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕೂಡ ಎಲ್ಲಾ ಮಂದಿರ, ಮಸೀದಿ, ಚರ್ಚ್ಗಳಿಗೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.