ಆಜಾನ್ ವಿವಾದ | ಹೈಕೋರ್ಟ್ ಆದೇಶ ಉಲ್ಲಂಘಿಸಿದ್ದರೆ ಕಾನೂನು ಕ್ರಮ: ಖಡಕ್ ಎಚ್ಚರಿಕೆ ಕೊಟ್ಟ ಪೊಲೀಸ್ ಆಯುಕ್ತ ಕಮಲ್ ಪಂತ್

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಹಲಾಲ್ ಬಳಿಕ ಆಜಾನ್ ಗಾಗಿ ಬಳಕೆಯಾಗುತ್ತಿರುವ ಮಸೀದಿಗಳ ಧ್ವನಿ ವರ್ಧಕ ತೆರವುಗೊಳಿಸೋ ಬಗ್ಗೆ ವ್ಯಾಪಕ ಒತ್ತಾಯ ಕೇಳಿ ಬರುತ್ತಿದ್ದು, ಈ ಕುರಿತು ಈ ಹಿಂದೆಯೇ ಹೈಕೋರ್ಟ್ ಆದೇಶವನ್ನು ಕೂಡ ನೀಡಿತ್ತು.
ಇಂದು ಕುರಿತು ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ , ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ಕೋರ್ಟ್ ಆದೇಶ ಉಲ್ಲಂಘಿಸಿದ್ದರೆ , ಕಾನೂನು ಕ್ರಮವನ್ನು ಪೊಲೀಸ್ ಇಲಾಖೆ ಕೈಗೊಳ್ಳಲಿದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೈಕೋರ್ಟ್ 6 ತಿಂಗಳ ಹಿಂದೆಯೇ ಮಸೀದಿಗಳಲ್ಲಿ ಆಜಾನ್ ಗೆ ಬಳಕೆಯಾಗುತ್ತಿರುವಂತ ಧ್ವನಿ ವರ್ಧಕ ಬಳಸುವಂತಿಲ್ಲ ಎಂಬುದಾಗಿ ಆದೇಶಿಸಿದೆ. ಮಸೀದಿ, ಮಂದಿರ, ಚರ್ಚ್ ಸೇರಿದಂತೆ ಕಾರ್ಖಾನೆ, ಪಬ್ ಗಳಿಗೂ ಈ ಸಂಬಂಧ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಆಜಾನ್ ವಿವಾದದ ಕುರಿತಂತೆ ಧಾರ್ಮಿಕ ಮುಖಂಡರ ಸಭೆಯನ್ನು ನಡೆಸಲಾಗಿದೆ. ಈಗಾಗಲೇ 40ಕ್ಕೂ ಹೆಚ್ಚು ಪ್ರಕರಣ ಕೂಡ ದಾಖಲಿಸಲಾಗಿದೆ. ಜೊತೆಗೆ ಧ್ವನಿ ವರ್ಧಕಗಳನ್ನು ಜಪ್ತಿ ಮಾಡಲಾಗಿದೆ. ಒಂದು ವೇಳೆ ನಿಯಮ ಮೀರಿ ಧ್ವನಿ ವರ್ಧಕ ಬಳಸಿ, ಆಜಾನ್ ಕೂಗಿದ್ರೇ.. ಹೈಕೋರ್ಟ್ ಆದೇಶ ಮೀರಿದ್ರೇ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!