ಹೊಸದಿಗಂತ ವರದಿ ಬಳ್ಳಾರಿ:
ಮಹಾನಗರ ಪಾಲಿಕೆಯ ಮೇಯರ್ ಆಗಿ 31ನೇ ವಾರ್ಡ್ ಕಾಂಗ್ರೆಸ್ ನ ಬಿ.ಶ್ವೇತಾ ಸೊಮಶೇಖರ್ ಅವರು ಬುಧವಾರ ಆಯ್ಕೆಯಾದರು. ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ 29 ಮತಗಳನ್ನು ಪಡೆದು ಬಿ.ಶ್ವೇತಾ ಸೋಮು ಅವರು ಆಯ್ಕೆಯಾದರು.
ಬಿಜೆಪಿ ಯಿಂದ ಹನುಮಂತ ಅವರು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ನಿಂದ ಬಿ. ಶ್ವೇತಾ ಸೋಮು, ಕುಬೇರ ಹಾಗೂ ಪಕ್ಷೇತರ ಅಭ್ಯರ್ಥಿ ಮಿಂಚು ಶ್ರೀನಿವಾಸ್ ಅವರು ನಾಮಪತ್ರ ಸಲ್ಲಿಸಿದ್ದರು. ಪಕ್ಷದ ಹೈ ಕಮಾಂಡ್ ನಿರ್ದೇಶನದಂತೆ ಕಾಂಗ್ರೆಸ್ ನ ಕುಬೇರ, ಕಾಂಗ್ರೆಸ್ ಸದಸ್ಯತ್ವ ಪಡೆದ ಪಕ್ಷೇತರ ಸದಸ್ಯ ಮಿಂಚು ಶ್ರೀನಿವಾಸ್ ಇಬ್ಬರು ನಾಮಪತ್ರವನ್ನು ಹಿಂಪಡೆದರು.
ಕಾಂಗ್ರೆಸ್ ನ ಬಿ. ಶ್ವೇತಾ ಸೋಮು ಅವರು 29ಮತಗಳನ್ನು ಪಡೆದು, ಆಯ್ಕೆಯಾದರು. ಬಿಜೆಪಿಯ ಹನುಮಂತ ಅವರು, 12ಮತಗಳನ್ನು ಪಡೆದು ಪರಾಭವಗೊಂಡರು. ಅಧಿಕೃತ ಘೋಷಣೆಯಾಗುತ್ತಿದ್ದಂತೆಯೇ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಕುಣಿದು ಕುಪ್ಪಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ನಗರ ಶಾಸಕ ನಾರಾ ಭರತ್ ರೆಡ್ಡಿ, ರಾಜ್ಯಸಭಾ ಸದಸ್ಯ ಡಾ. ನಾಸೀರ್ ಹುಸೇನ್, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಆರ್.ವಿ. ವೆಂಕಟೇಶ ಸೇರಿದಂತೆ ಇತರರು ಉಸ್ಥಿತರಿದ್ದರು.