ಶ್ರೀ ಮಹಾಲಿಂಗೇಶ್ವರ ದೇವರ ದರುಶನ ಪಡೆದ ಬಿ.ಎಲ್. ಸಂತೋಷ್

ಹೊಸದಿಗಂತ ವರದಿ, ಪುತ್ತೂರು:
ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ಕಾರ್ಯದರ್ಶಿ(ಸಂಘಟನೆ) ಬಿ.ಎಲ್. ಸಂತೋಷ್ ಅವರು ಭೇಟಿ ನೀಡಿದರು.
ಬೆಳಗ್ಗೆ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಮಾಡಿ ಬಳಿಕ ದೇವಳದ ಅಭಿವೃದ್ಧಿ ವ್ಯವಸ್ಥಾಪನಾ ಕುರಿತು ದೇವಳದ ಸಮಿತಿಯವರೊಂದಿಗೆ ಮಾಹಿತಿ ಪಡೆದು ಕೊಂಡರು.


ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಡಾ. ಸುಧಾ ಎಸ್. ರಾವ್, ವೀಣಾ ಬಿ.ಕೆ., ರವೀಂದ್ರನಾಥ ರೈ ಬಳ್ಳಮಜಲು, ರಾಮದಾಸ್ ಗೌಡ, ಬಿ. ಐತ್ತಪ್ಪ ನಾಯ್ಕ ಶೇಖರ್ ನಾರಾವಿ, ದಿಶಾ ಸಮಿತಿ ಸದಸ್ಯ ರಾಮದಾಸ್ ಹಾರಾಡಿ ಉಪಸ್ಥಿತರಿದ್ದರು.
ದೇವಳದ ಪ್ರಧಾನ ಅರ್ಚಕ ವೇ.ಮೂ. ವಿ.ಎಸ್. ಭಟ್ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಪ್ರಸಾದ ವಿತರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಅವರು ಶಾಲು ಹೊದೆಸಿ ಗೌರವಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!