ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿಯಾಗಲೆಂದು ಕಾಳಿಕಾಂಬ ದೇವಾಲಯದ ಆವರಣದಲ್ಲಿ ಅಶ್ವಮೇಧಯಾಗ

ಹೊಸದಿಗಂತ ವರದಿ ಮಂಡ್ಯ:

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ 2023ರ ಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ನಗರದ ಕಾಳಿಕಾಂಬ ದೇವಾಲಯದ ಆವರಣದಲ್ಲಿ ಅಶ್ವಮೇಧ ಯಾಗ ನಡೆಸಲಾಯಿತು.
ಬಿ.ವೈ.ವಿಜಯೇಂದ್ರ ಅಭಿಮಾನಿಗಳು ಅಶ್ವಮೇಧ ಯಾಗದಲ್ಲಿ ಭಾಗವಹಿಸಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಶಿವಕುಮಾರ ಆರಾಧ್ಯ ಮಾತನಾಡಿ, ಶ್ರೀ ಕಾಳಿಕಾಂಬ ದೇವಾಲಯದಲ್ಲಿ ವಿಶೇಷವಾಗಿ ಅಶ್ವಮೇಧ ಯಾಗಕ್ಕೆಂದು ಒಂದು ಕುದರೆಯನ್ನು ತರಿಸಿ ಅಶ್ವಮೇಧ ಯಾಗ ನಡೆಸಲಾಗಿದೆ ಎಂದರು.
ಅಶ್ವಮೇಧಯಾಕ್ಕೆಂದು ದ್ವಾಪರ ಕಾಲಯುಗದಲ್ಲಿ ಕುದುರೆಯ ಸಾರಥ್ಯವನ್ನು ಅರ್ಜುನ ವಹಿಸಿದ್ದರು.

ಅದೇರೀತಿ ಈ ಯಾಗ ನಡೆಸಿ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬುದು ನಮ್ಮೆಲ್ಲರ ಹಾಗೂ ಅಭಿಮಾನಿಗಳ ಆಶಯವಾಗಿದೆ. ಇದನ್ನು ಮನಗಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಾಗೂ ರಾಜ್ಯದ ನಾಯಕರು ಇದನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ರೈತ ಮೋರ್ಚಾದ ನಗರಾಧ್ಯಕ್ಷ ಹೊಸಹಳ್ಳಿ ಶಿವು, ಮುಖಂಡರಾದ ಮಾದರಾಜ ಅರಸು, ಮಹದೇವು, ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!