ವಿಧಾನಸಭೆ ಚುನಾವಣೆ: ಕೊಲ್ಹಾರದಲ್ಲಿ ಬಿ.ವೈ.ವಿಜಯೇಂದ್ರ ಅದ್ಧೂರಿ ರೋಡ್ ಶೋ

ಹೊಸದಿಗಂತ ವರದಿ ವಿಜಯಪುರ:

ವಿಧಾನಸಭಾ ಚುನಾವಣೆ ಪ್ರಚಾರ ಹಿನ್ನೆಲೆ ಬಸವನ ಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಕೆ. ಬೆಳ್ಳುಬ್ಬಿ ಪರ ಕೊಲ್ಹಾರ ಪಟ್ಟಣದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಅದ್ಧೂರಿ ರೋಡ್ ಶೋ ಹಮ್ಮಿಕೊಳ್ಳಲಾಯಿತು.

ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿದ ಬಿಜೆಪಿ ನಾಯಕರಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ಕಾರ್ಯಕರ್ತರು ಸ್ವಾಗತ ಕೋರಿದರು.

ಇಲ್ಲಿನ ದಿಗಂಬರೇಶ್ವರ ಮಠದಿಂದ ಪ್ರಾರಂಭವಾದ ರೋಡ್ ಶೋ ಶಿವಾಜಿ ವೃತ್ತ, ಸ್ವಾಮಿ ವಿವೇಕಾನಂದ ವೃತ್ತ, ರಾಣಿ ಚನ್ನಮ್ಮ ವೃತ್ತ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ ಎದುರಿನಿಂದ ಹಾಯ್ದು ಮಹಾತ್ಮ ಗಾಂಧಿ ವೃತ್ತ ಅಗಸಿ ಮೂಲಕ ತೆರಳಿ ದ್ಯಾಮವದೇವಿ ದೇವಸ್ಥಾನದ ಹತ್ತಿರ ಮುಕ್ತಾಯವಾಯಿತು.

ಬಸವನಬಾಗೇವಾಡಿ ಬಿಜೆಪಿ ಅಭ್ಯರ್ಥಿ ಎಸ್.ಕೆ. ಬೆಳ್ಳುಬ್ಬಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಮುಖಂಡ ಪರಮಾನಂದ ತನಿಕೇದಾರ್, ಸಿ.ಎಂ. ಗಣಕುಮಾರ, ಅಖಿಲ ಗೌಡ ಪಾಟೀಲ ಸೇರಿದಂತೆ ಗಣ್ಯರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!