ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ದಾರುಣ ಘಟನೆ ನಡೆದಿದ್ದು, ಐದು ತಿಂಗಳು ಪ್ರಾಯದ ಮರಿಯಾನೆಯೊಂದರ ಶವ ಪತ್ತೆಯಾಗಿದೆ.
ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದ ಪಕ್ಕದ ಗುಂಡ್ಯ ಹೊಳೆ ಬದಿ ಈ ಗಂಡು ಆನೆ ಮರಿಯ ಶವ ಪತ್ತೆಯಾಗಿದ್ದು, ಘಟ್ಟ ಪ್ರದೇಶದಲ್ಲಿ ಆಹಾರ ಹುಡುಕುವ ವೇಳೆ ಕಾಲು ಜಾರಿ ನೀರಿಗೆ ಬಿದ್ದು, ಕೊಚ್ಚಿಕೊಂಡು ಬಂದಿರಬೇಕು ಎಂದು ಶಂಕಿಸಲಾಗಿದೆ.
ಇದು ಸಕಲೇಶಪುರ ವಲಯ ಅರಣ್ಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ ಶಾಖೆ ಕೆಂಪುಹೊಳೆ ಮೀಸಲು ಅರಣ್ಯ ಪ್ರದೇಶವಾಗಿದ್ದು, ಘಟನೆಯ ಮಾಹಿತಿ ಪಡೆದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ.