ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ಮಕ್ಕಳು ಸೋಂಕಿಗೆ ಗುರಿಯಾಗುತ್ತಿರುವ ಬಗ್ಗೆ ಪೋಷಕರಿಂದ ಮಾಹಿತಿ ಬಂದಿದೆ. ಈ ನಿಟ್ಟಿನಲ್ಲಿ ಶಾಲೆಗಳಿಗೆ ಮಾತ್ರ ಶುಕ್ರವಾರ ಸಾಮಾನ್ಯ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಅವರು ಹೇಳಿದರು.
ಕೋವಿಡ್ ಪ್ರಕರಣಗಳ ಸಂಖ್ಯೆ ಅಲ್ಪ ಮಟ್ಟದಲ್ಲಿ ಹೆಚ್ಚಾಗಿದರೂ, ಆಸ್ಪತ್ರೆಗೆ ದಾಖಲಾಗುವರರ ಸಂಖ್ಯೆ ಕಡಿಮೆ ಇದೆ. ಸೋಂಕಿನ ಬಗ್ಗೆ ಗಾಬರಿಪಡಬೇಕಿಲ್ಲ , ಸ್ವಲ್ವ ಎಚ್ಚರ ವಹಿಸಬೇಕು ಎಂದು ಮನೀಷ್ ಸಿಸೋಡಿಯಾ ಹೇಳಿದ್ದಾರೆ.