ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೆಲವೆಡೆ ಮೆನಗಳು ಜಲಾವೃತವಾಗಿದೆ. ಒಟ್ಟು 27 ಜಿಲ್ಲೆಗಳಲ್ಲಿ ಶಾಲೆಗಳಿಗೆ ಮಳೆಯಿಂದಾಗಿ ರಜೆ ಘೋಷಿಸಲಾಗಿದೆ.
ಚೆನ್ನೈ, ಚೆಂಗಲ್ಪೇಟ್, ಕಾಂಚೀಪುರಂ, ತಿರುವಳ್ಳೂರು ಮತ್ತು ವಿಲ್ಲುಪುರಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶ್ರೀಲಂಕಾ ಕರಾವಳಿಯಲ್ಲಿ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪೇಟ್ನಲ್ಲಿ ಭಾರೀ ಮಳೆಯಾಗುತ್ತಿದೆ.
ಇತ್ತೀಚಿನ ಮುನ್ಸೂಚನೆಯ ಪ್ರಕಾರ, ನೀಲಗಿರಿ, ಕೊಯಮತ್ತೂರು, ತಿರುಪ್ಪೂರ್, ಕಡಲೂರು, ಈರೋಡ್, ವಿಲ್ಲುಪುರಂ, ಕಾಂಚೀಪುರಂ, ಚೆಂಗಲ್ಪಟ್ಟು, ತಿರುವಳ್ಳೂರು, ಚೆನ್ನೈ, ಮಧುರೈ, ಕನ್ಯಾಕುಮಾರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಏತನ್ಮಧ್ಯೆ, ನೆರೆಯ ಪುದುಚೇರಿಯಲ್ಲಿ ಗುರುವಾರ ರಾತ್ರಿಯಿಂದ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಶುಕ್ರವಾರ ಮತ್ತು ಶನಿವಾರ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಪ್ರಾದೇಶಿಕ ಸರ್ಕಾರ ರಜೆ ಘೋಷಿಸಿದೆ.
ನವೆಂಬರ್ 12 ರ ಶನಿವಾರದವರೆಗೆ ಕೇರಳ ಮತ್ತು ಆಂಧ್ರಪ್ರದೇಶ ಸೇರಿದಂತೆ ದಕ್ಷಿಣದ ವಿವಿಧ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.