ಕಾರು ಚಾಲಕ ಸಾವಿನ ಕುರಿತು ಸಚಿವ ನಿರಾಣಿ ಹೇಳಿಕೆ ಹಿನ್ನೆಲೆ, ಸಿಎಂಗೆ ಯತ್ನಾಳ ಪತ್ರ

ದಿಗಂತ ವರದಿ ವಿಜಯಪುರ:

ಕಾರು ಚಾಲಕ ಸಾವಿನ ಕುರಿತು ಸಚಿವ ಮುರುಗೇಶ ನಿರಾಣಿ ಹೇಳಿಕೆ ಹಿನ್ನೆಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಸಚಿವ ನಿರಾಣಿ ಹೇಳಿಕೆ ಬೆನ್ನಲ್ಲೇ ಸಿಎಂ ಬೊಮ್ಮಾಯಿಗೆ ಬರೆದ ಪತ್ರದಲ್ಲಿ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಸಬೇಕು. ಸಂಪುಟದ ಸದಸ್ಯರು ಈ ರೀತಿ ಆರೋಪ ಮಾಡಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲಿ‌‌.

ಇಂತಹ ಆರೋಪದಿಂದ ಸರ್ಕಾರದ ಕುರಿತು ತಪ್ಪು ಸಂದೇಶ ಹೊಗುತ್ತದೆ. ದೇಶದ ಜನತೆ ಇದರ ಬಗ್ಗೆ ಸತ್ಯಾಸತ್ಯತೆ ಗೊತ್ತಾಗಬೇಕು. 24 ಗಂಟೆ ಒಳಗಾಗಿ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಬೇಕು. ಅಲ್ಲದೆ ಸುಳ್ಳು ಆರೋಪ ಮಾಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!