ಹೊಸದಿಗಂತ ವರದಿ, ವಿಜಯಪುರ:
ಗೋದಾಮೊಂದರಲ್ಲಿ ಚೀಲಗಳು ಪಲ್ಟಿಯಾಗಿ, 5 ಕ್ಕೂ ಹೆಚ್ಚು ಕಾರ್ಮಿಕರು ಚೀಲದಡಿಯಲ್ಲಿ ಸಿಲುಕಿಕೊಂಡಿರುವ ಘಟನೆ ನಗರದ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದಿದೆ.
ನಗರದ ಅಲಿಯಾಬಾದ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಗೋದಾಮಿನಲ್ಲಿ ನೂರಾರು ಚೀಲಗಳ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದು, ಸ್ಥಳದಲ್ಲಿ ರಕ್ಷಾಣಾ ಕಾರ್ಯಾಚರಣೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.