ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇನ್ನೂ ನಟ ದರ್ಶನ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ವಿಚಾರ ಕೇಳಿ ಸ್ಯಾಂಡಲ್ವುಡ್ ನಟ ನಟಿಯರು ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಗೂ ಸ್ಟೋರಿ ಶೇರ್ ಮಾಡಿಕೊಳ್ಳುವ ಮೂಲಕ ಹರ್ಷ ವ್ಯಕ್ತಪಡಿಸುತ್ತಿದ್ದಾರೆ.
ಸ್ಯಾಂಡಲ್ವುಡ್ ನಟಿ, ನಟ ದರ್ಶನ್ ಆಪ್ತ ಗೆಳತಿ ರಕ್ಷಿತಾ ಪ್ರೇಮ್ ಕೂಡ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ಫೋಟೋದಲ್ಲಿ ಹೂವಿನ ಜೊತೆಗೆ ಹ್ಯಾಪಿ ನ್ಯೂಸ್, ಹ್ಯಾಪಿ ಡೇ ಅಂತ ಬರೆದುಕೊಂಡಿದ್ದಾರೆ.
ನಟ ಧನ್ವೀರ್ ಗೌಡ ದರ್ಶನ್ ಜೊತೆಗೆ ವೇದಿಕೆ ಮೇಲೆ ನಿಂತುಕೊಂಡಿರೋ ಫೋಟೋದಲ್ಲಿ ಉಸಿರು ಇರುವವರೆಗೂ ಇರುತ್ತೇವೆ ನಿಮ್ಮಿಂದೆ ಅಂತ ಬರೆದುಕೊಂಡಿದ್ದಾರೆ.
ಮತ್ತೊಂದು ಕಡೆ ತರುಣ್ ಸುಧೀರ್ ಹಾಗೂ ಸೋನಲ್ ದಂಪತಿ ಕೂಡ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ತರುಣ್ ಸುಧೀರ್ ಅವರು ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಶುಭಾಶಯಗಳು ಅಂತ ದರ್ಶನ್ ಅವರ ಫೋಟೋವನ್ನು ಶೇರ್ ಮಾಡಿಕೊಂದ್ದಾರೆ, ಜೊತೆಗೆ ಸೋನಲ್ ಕಾಟೇರ ಸಿನಿಮಾದ ಸಾಂಗ್ ಜೊತೆಗೆ ಇಮೋಜಿ ಹಾಕಿಕೊಂಡಿದ್ದಾರೆ.