ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್​ಗೆ ಛೋಟಾ ರಾಜನ್ ಮೇಲ್ಮನವಿ ಸಲ್ಲಿಸಿದ್ದ, ಜಾಮೀನು ಮಂಜೂರು ಮಾಡಿ ಅಧೀನ ನ್ಯಾಯಾಲಯದ ಶಿಕ್ಷೆಯನ್ನು ರದ್ದುಪಡಿಸುವಂತೆ ಅರ್ಜಿಯಲ್ಲಿ ಛೋಟಾ ರಾಜನ್ ಕೋರಿದ್ದ. ಸಧ್ಯಕ್ಕೆ ಛೋಟಾ ರಾಜನ್​ಗೆ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ ಒಂದು ಲಕ್ಷ ರೂ. ಭದ್ರತಾ ಬಾಂಡ್ ನೀಡಲು ಆದೇಶಿಸಲಾಗಿದೆ.

ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!