ರಾಜ್ಯಾದ್ಯಂತ ಬಕ್ರೀದ್‌ ಸಂಭ್ರಮ, ಬೆಂಗಳೂರಿನಲ್ಲಿ ಕೆಲವು ಕಡೆ ಟ್ರಾಫಿಕ್‌ ಜಾಮ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯಾದ್ಯಂತ ಇಂದು ಬಕ್ರಿದ್ ಹಬ್ಬ ಸಂಭ್ರಮ ಮನೆ ಮಾಡಿದೆ. ಬಕ್ರೀದ್ ಹಿನ್ನೆಲೆ ಬೆಂಗಳೂರಿನ ಕೆಲವೆಡೆ ಟ್ರಾಫಿಕ್ ಸಮಸ್ಯೆ ಎದುರಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯಲಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಪೊಲೀಸ್ ಭದ್ರತೆ ಕೈಗೊಂಡಿದ್ದು ಚಾಮರಾಜಪೇಟೆ ಸುತ್ತಮುತ್ತ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಇದರಿಂದಾಗಿ ಆಫೀಸ್‌ ತೆರಳುವವರಿಗೆ, ಶಾಲಾ ಕಾಲೇಜುಗಳಿಗೆ ಹೋಗುವವರಿಗೆ ತೊಂದರೆ ಉಂಟಾಗಿದೆ.

ಈಗಾಗಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಬಕ್ರೀದ್ ಹಿನ್ನೆಲೆ ಕೆಲ ಕಡೆ ರಸ್ತೆ ಮಾರ್ಗ ಬದಲಿ, ನಿರ್ಬಂಧಗಳನ್ನು ವಿಧಿಸಿದ್ದಾರೆ ಮತ್ತು ಸಂಚಾರ ಸಲಹೆಯನ್ನು ನೀಡಿದ್ದಾರೆ. ಈದ್ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆ ಸಂಚಾರ ನಿರ್ಬಂಧಗಳನ್ನು ವಿಧಿಸಲಾಗಿದೆ. ಸದ್ಯ ಮುಸ್ಲಿಮರು ನಮಾಜ್​ಗಾಗಿ ಈದ್ಗಾಗಳ ಬಳಿ ಸೇರುತ್ತಿದ್ದು ಕೆಲವೆಡೆ ಸಂಚಾರ ವ್ಯತ್ಯಯ ಕಂಡು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!