ಕೊಡಗಿನಲ್ಲಿ ಜಾನುವಾರು ಸಾಗಾಣಿಕೆ-ಜಾತ್ರೆಗೆ ನಿಷೇಧ

ಹೊಸದಿಗಂತ ವರದಿ ಮಡಿಕೇರಿ:‌

ನೆರೆ ಜಿಲ್ಲೆಗಳ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಂತೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ರೋಗ ಹರಡುವಿಕೆ ತಡೆಗಟ್ಟಲು ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿ ಕೊಳ್ಳಬೇಕಾಗಿದೆ. ಅಲ್ಲದೆ ರೋಗ ಹರಡುವುದನ್ನು ತಡೆಗಟ್ಟಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಆದ್ದರಿಂದ ಪಶುಪಾಲನಾ ಇಲಾಖೆಯ ಕೋರಿಕೆಯಂತೆ ಜಾನುವಾರು ಸಾಗಾಣಿಕೆ, ಜಾತ್ರೆ ಮತ್ತು ಜಾನುವಾರು ಸಂತೆಯನ್ನು ಅ.22 ರಿಂದ ನ.21 ರವರೆಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!