ಮುಜರಾಯಿ ದೇವಾಲಯಗಳ ಸುತ್ತಮುತ್ತಾ ತಂಬಾಕು ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಜರಾಯಿ ದೇವಾಲಯಗಳ ಸುತ್ತಮುತ್ತಾ ‘ತಂಬಾಕು ಉತ್ಪನ್ನ’ಗಳ ಮಾರಾಟ ನಿಷೇಧಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ದೇವಾಲಯಗಳ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧಕ್ಕೆ ನಿರ್ಧರಿಸಿದೆ. ಶೀಘ್ರದಲ್ಲೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಧರ್ಮ’ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ. ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ನಮ್ಮ ಸರ್ಕಾರ ಎಂದು ಟ್ವೀಟ್ ಮಾಡಿದೆ. ಶೀಘ್ರದಲ್ಲೇ ಈ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!