ಜೈಲಿನಿಂದ ಬಿಡುಗಡೆಯಾಗಿ ಬಂದ್ರು ರೇವಣ್ಣಗೆ ಕಡಿಮೆಯಾಗಿಲ್ಲ ಟೆನ್ಷನ್, ಈ ಆತಂಕಕ್ಕೆ ಕಾರಣ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾಮೀನು ಪಡೆದು ಜೈಲಿನಿಂದ ಹೊರಬಂದರೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಟೆನ್ಷನ್ ಕಡಿಮೆಯಾಗಿಲ್ಲ. ಇವತ್ತು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ಜಯನಗರದ ಗಣಪತಿ ದೇವಸ್ಥಾನ, ಬಸವನಗುಡಿಯ ಗಂಗಾಧರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ, ನಂತರ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಕೆಆರ್ ನಗರ ಅಪಹರಣ ಪ್ರಕರಣದಲ್ಲಿ ಜಾಮೀನು ಮಂಜೂರು ಆಗಿದ್ದು. ಇದೀಗ ಹೊಳೆನರಸೀಪುರದಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದಲ್ಲೂ ಜಾಮೀನು ಪಡೆಯಲು ಸೂಚಿಸಿದ್ದಾರೆ. ಅತ್ಯಾಚಾರ ಪ್ರಕರಣದ ಮೊದಲ ಆರೋಪಿ ರೇವಣ್ಣ ಬೆಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರಾಗಿ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.

ಹೊಳೆನರಸೀಪುರ ಪ್ರಕರಣವು ಜಾಮೀನು ನೀಡಬಹುದಾದ ಪ್ರಕರಣ ಎಂದು ಶಂಕಿಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ಹಿಂದೆ ಬಂಧನ ಭೀತಿಯಿಂದ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಎಸ್ಐಟಿ ಎಸ್‌ಪಿಪಿ, ಜಾಮೀನು ರಹಿತ ಪ್ರಕರಣಗಳನ್ನ ದಾಖಲಿಸಿಲ್ಲ ಅಂತಾ ಸ್ಪಷ್ಟನೆ ಕೊಟ್ಟ ಬಳಿಕ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!