ಖಾವಿ ಧರಿಸಿ ಧ್ಯಾನ ಮಾಡುತ್ತಿದ್ದಾಗಲೇ ಪೊಲೀಸ್ ಬಲೆಗೆ ಬಿದ್ದ ಆ್ಯಸಿಡ್ ನಾಗೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ತಿಂಗಳು ಬೆಂಗಳೂರುನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ಎರಚಿ‌ ವಿಕೃತಿ ಮೆರೆದಿದ್ದ ಆರೋಪಿ‌ ನಾಗೇಶ್ ಕೊನೆಗೂ ಬಂಧನವಾಗಿದೆ.
ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿಯ ವೇಷದಲ್ಲಿ ಆರೋಪಿ ನಾಗ ಸಿಕ್ಕಿಬಿದ್ದಿದ್ದಾನೆ.
ಕೃತ್ಯ ಎಸಗಿದಾಗಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್​​ ಖಾವಿ ಧರಿಸಿ ಧ್ಯಾನ ಮಾಡುತ್ತಿದ್ದ. ಬೆಂಗಳೂರು ಪೊಲೀಸರು ಈಗಾಗಲೇ ಆತನ ಫೋಟೋಗಳನ್ನ ಇತರ ಎಲ್ಲ ರಾಜ್ಯಗಳ ಪೊಲೀಸರಿಗೆ ಕಳುಹಿಸಿದ್ದರು. ಕೊನೆಗೂ ಇಂದು ಸಿಕ್ಕಿಬಿದ್ದಿದ್ದಾನೆ.
ಆರೋಪಿಯೊಂದಿಗೆ ಪೊಲೀಸರು ನಗರದತ್ತ ಬರುತ್ತಿದ್ದು, ರಾತ್ರಿ 11 ಗಂಟೆ ವೇಳೆಗೆ ಬೆಂಗಳೂರು ತಲುಪಲಿದ್ದಾರೆ. ಆರೋಪಿಯನ್ನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!