ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ (ISKCON) ಮಾಜಿ ನಾಯಕ ಚಿನ್ಮೋಯ್ ಕೃಷ್ಣ ದಾಸ್ಗೆ ಬಾಂಗ್ಲಾದೇಶದ ನ್ಯಾಯಾಲಯವು ಬುಧವಾರ ಜಾಮೀನು ನೀಡಿದೆ ಎಂದು ದಿ ಡೈಲಿ ಸ್ಟಾರ್ ವರದಿ ಮಾಡಿದೆ.
ದೇಶದ ಸಂವಿಧಾನ ಮತ್ತು ರಾಷ್ಟ್ರೀಯ ಚಿಹ್ನೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಚಿನ್ಮೋಯ್ ಕೃಷ್ಣ ದಾಸ್ ಅವರನ್ನುಬಾಂಗ್ಲಾದೇಶ ಸರ್ಕಾರ ಬಂಧಿಸಿತ್ತು. ಬಂಧನ ಮಾಡಿದ ಹಲವು ತಿಂಗಳುಗಳ ಬಳಿಕ ಈ ಆದೇಶ ಹೊರಬಿದ್ದಿದೆ.
ದಾಸ್ ಅವರನ್ನು ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಮತ್ತು ನಂತರ ಚಟ್ಟೋಗ್ರಾಮ್ ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿದ ನಂತರ ಜೈಲಿಗೆ ಕಳುಹಿಸಲಾಗಿತ್ತು.