ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಬಾಂಗ್ಲಾ ಮಂದಿಯನ್ನು ರಕ್ಷಣೆ ಮಾಡಿದ್ದಕ್ಕಾಗಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಉಕ್ರೇನ್ನಲ್ಲಿ ಬಾಂಗ್ಲಾದ ಎಂಟು ಮಂದಿ ಸಿಲುಕಿದ್ದು, ಅವರ ಸ್ಥಳಾಂತರಕ್ಕೆ ಭಾರತ ಸಹಾಯ ಮಾಡಿದೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸರ್ಕಾರ ಆಪರೇಷನ್ ಗಂಗಾ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾರಣೆ ಅಡಿಯಲ್ಲಿ ಬಾಂಗ್ಲಾ, ನೇಪಾಳ, ಟುನೇಶಿಯನ್ ವಿದ್ಯಾರ್ಥಿಗಳನ್ನೂ ರಕ್ಷಣೆ ಮಾಡಲಾಗಿದೆ ಎಂದು ಬಾಂಗ್ಲಾ ಸರ್ಕಾರದ ಮೂಲಗಳು ಮಾಹಿತಿ ನೀಡಿವೆ.
Prime Minister of Bangladesh Sheikh Hasina thanks PM Narendra Modi for rescuing its 9 nationals from Ukraine under ‘Operation Ganga’. Nepalese, Tunisian students were also rescued under this operation: Government sources
(file photos) pic.twitter.com/lXcMt8zu4A
— ANI (@ANI) March 9, 2022