May 19, 2026
Tuesday, May 19, 2026
spot_img

ಬಾಂಗ್ಲಾ ಉದ್ವಿಗ್ನತೆ: ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳ ಕಾರ್ಯಾಚರಣೆ ಸ್ಥಗಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ ಕಾರ್ಯಾಚರಣೆಯನ್ನು ಮುಂದಿನ ಸೂಚನೆ ಬರುವವರೆಗೂ ಭಾರತ ಸ್ಥಗಿತಗೊಳಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಕಳೆದ ವರ್ಷ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರವನ್ನು ಪದಚ್ಯುತಗೊಳಿಸಲು ಕಾರಣವಾದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯ ಪ್ರಮುಖ ನಾಯಕಿಯಾಗಿದ್ದ ಹಾದಿ, ಫೆಬ್ರವರಿ 12 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಯಾಗಿದ್ದರು.

ಡಿಸೆಂಬರ್ 12 ರಂದು ಕೇಂದ್ರ ಢಾಕಾದ ಬಿಜೋಯ್‌ನಗರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ಬಂದೂಕುಧಾರಿಗಳು ಉಸ್ಮಾನ್ ಹಾದಿ ತಲೆಗೆ ಗುಂಡು ಹಾರಿಸಿದ್ದರು. ಗುರುವಾರ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ನಿಧನರಾದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !