ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೆಲವು ಪ್ಲಾಸ್ಟಿಕ್ ವಸ್ತುಗಳನ್ನು ಬಹಳ ಹಿಂದೆಯೇ ನಿಷೇಧಿಸಲಾಗಿದೆ. ಆದರೆ ಈಗಲೂ ಹುಬ್ಬಳ್ಳಿಯಲ್ಲಿ ಪ್ಲಾಸ್ಟಿಕ್ ಮಾಫಿಯಾ ನಡೆಯುತ್ತಿದೆ. ಪ್ಲಾಸ್ಟಿಕ್ ಮಾರಾಟಗಾರರೇ ಹಫ್ತಾ ವಸೂಲಿಗಿಳಿದಿದ್ದಾರೆ ಎಂದು ಹೇಳಲಾಗಿದೆ. ಆದರೆ ಇದೆಲ್ಲ ಗೊತ್ತಿದ್ದರೂ ಪಾಲಿಕೆ ಅಧಿಕಾರಿಗಳ ಮೌನ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಹುಬ್ಬಳ್ಳಿಯ, ದಾರವಾಡದಲ್ಲಿ ಪ್ಲಾಸ್ಟಿಕ್ ಮಾರಾಟಗಾರರು ಕಾರ್ಪೊರೇಟ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ಪರವಾಗಿ ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಹುಬ್ಬಳ್ಳಿ ಮಂಜುನಾಥ್ ಲೂತಿಮಠ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿರುವ ಆರೋಪವಿದೆ. ಕಳೆದ ವರ್ಷ ನವೆಂಬರ್ ನಲ್ಲಿ ಪ್ಲಾಸ್ಟಿಕ್ ವರ್ತಕರ ಅನಧಿಕೃತ ಅಧ್ಯಕ್ಷ ವಿಜಯ್ ಅಳಗುಂಡಗಿ ಅವರು ಹಫ್ತಾ ವಸೂಲಿ ಮಾಡುವವರ ವಿರುದ್ಧ ನಗರದ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇನ್ನಾದರೂ ಈ ಎಲ್ಲ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಹುಬ್ಬಳ್ಳಿ ದಾರವಾಡದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ನಿಲ್ಲದಿರುವುದು ಸ್ಪಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಇದರ ಸ್ವರೂಪ ಹೆಚ್ಚಾಗೋಕೂ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡರೆ ಉತ್ತಮ.