July 21, 2026
Tuesday, July 21, 2026
spot_img

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌: PIL ವಜಾಗೊಳಿಸಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ.

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಬಾರದು ಎಂದು ಪ್ರತಾಪ್ ಸಿಂಹ, ಟಿ. ಗಿರೀಶ್ ಕುಮಾರ್ ಹಾಗೂ ಹೆಚ್. ಎಸ್. ಗೌರವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಾಧೀಶರಾದ ಸಿ. ಎಂ. ಜೋಶಿ ಅವರಿದ್ದ ನ್ಯಾಯಪೀಠ, ಅರ್ಜಿಗಳನ್ನು ವಜಾಗೊಳಿಸಿ ಆದೇಶ ಪ್ರಕಟಿಸಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !