ಬಾರ್​ನಲ್ಲಿ ಕುಡಿದು ಗಲಾಟೆ: ಚಾಕುವಿನಿಂದ ಇರಿದು ಕ್ಯಾಶಿಯರ್ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮದ್ಯ ಸೇವಿಸುವ ವಿಷಯಕ್ಕೆ ಬಾರ್‌ನಲ್ಲಿ ಗಲಾಟೆ ನಡೆದಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸಚಿನ್ (27) ಕೊಲೆಯಾದ ಯುವಕನಾಗಿದ್ದು, ಈತ ಬಾರ್ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ. ಶಿವಮೊಗ್ಗ ತಾಲೂಕಿನ ಆಯನೂರಿನ ನವರತ್ನ ಬಾರ್ ನಲ್ಲಿ ಈ ಗಲಾಟೆ ಸಂಭವಿಸಿದ್ದು, ನಿರಂಜನ, ಸತೀಶ್ ಹಾಗೂ ಅಶೋಕ್ ನಾಯ್ಕ್ ಕೊಲೆ ಮಾಡಿದ ಆರೋಪಿಗಳು.

ಘಟನೆ ಹಿನ್ನೆಲೆ:

ಕಳೆದ ರಾತ್ರಿ ನಿರಂಜನ್, ಸತೀಶ್ ಹಾಗೂ ಆಶೋಕ್ ನಾಯ್ಕ್ ಎಂಬುವರು ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯದವರೆಗೂ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಸಚಿನ್​, ಬಾರ್​ ಮುಚ್ಚುವ ಸಮಯ ಆಗಿದೆ ಹೊರಗೆ ಹೋಗಿ ಎಂದಿದ್ದಾನೆ, ಇದಕ್ಕೆ ಕೋಪಗೊಂಡ ಮೂವರು ಬಾರ್​ನಲ್ಲಿಯೇ ಜಗಳಕ್ಕಿಳಿದಿದ್ದಾರೆ.

ಕೂಡಲೇ ಬಾರ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ಮೂವರು ಪೊಲೀಸರ ಎದುರಲ್ಲೇ ಸಚಿನ್​ ಎದೆಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಕೂಡಲೇ ಸಚಿನ್‌ನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸುವ ವೇಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!