ಬಾಣಂತಿಯರ ಸಾವು, ಮೆಡಿಕಲ್ ಮಾಫಿಯಾ ವಿಚಾರ: ಸದನದಲ್ಲಿ ಗದ್ದಲ, ಕೋಲಾಹಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಣಂತಿಯರ ಸಾವು ಕರ್ನಾಟಕವನ್ನೇ ಬೆಚ್ಚಿ ಬೀಳಿಸುವಂತಹ ಘಟನೆಯಾಗಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

ವಿಧಾನಸಭೆ ಸದನದಲ್ಲಿ ಬಾಣಂತಿಯರ ಸಾವು, ಮೆಡಿಕಲ್ ಮಾಫಿಯಾ ವಿಚಾರವಾಗಿ ಚರ್ಚೆ ನಡೆಯಿತು. ನಿಯಮ 69 ಅಡಿಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದರು.

ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸುವ ಘಟನೆಯಾಗಿದೆ. ಬಳ್ಳಾರಿ ಮಾತ್ರವಲ್ಲ ರಾಯಚೂರು, ಬೆಳಗಾವಿ, ಚಿತ್ರದುರ್ಗದಲ್ಲೂ ಬಾಣಂತಿಯರ ಸಾವಾಗಿದೆ. ಆರೋಗ್ಯ ಇಲಾಖೆ ರೋಗ ಪೀಡಿತ ಇಲಾಖೆ ಆಗಿದೆ. ಘಟನೆ ಆದ 6 ದಿನದ ಬಳಿಕ ಸಚಿವರು ಜಿಲ್ಲೆಗೆ ಹೋಗಿದ್ದಾರೆ. ವೈದ್ಯರು ತಪ್ಪು ಒಪ್ಪಿಕೊಳ್ಳುತ್ತಿಲ್ಲ, ಡ್ರಗ್ ಕಂಟ್ರೋಲರ್‌ನನ್ನು ಬಲಿಪಶು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

 

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!