ನಿರಾಶ್ರಿತ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಿಳೆಯೊಬ್ಬರು ರಾತ್ರಿ ಮಲಗಿರುವಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಗಂಗಾ (38) ಕೊಲೆಯಾದ ದುರ್ದೈವಿ. ಇವರು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ನಿಮಿಷಾಂಬ ದೇವಾಲಯದ ಬಳಿಯ ಕಾವೇರಿ ನದಿಯಲ್ಲಿ ಕಾಸು ಹೆಕ್ಕುವ ಕಾಯಕವನ್ನು ಮಾಡುತ್ತಿದ್ದರು. ಇವರ ಗುಂಪಿನ ಸದಸ್ಯರೆಲ್ಲರೂ ನಿರಾಶ್ರಿತರಾಗಿದ್ದು, ಇವರು ಮೈಸೂರು – ಬೆಂಗಳೂರು ಮೇಲ್ಸೇತುವೆಯ ಕೆಳಗೆ ತಮ್ಮ ಗುಂಪಿನೊಂದಿಗೆ ವಾಸಿಸುತ್ತಿದ್ದರು.

ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!