CRIME | ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ

ಹೊಸದಿಗಂತ ವರದಿ ಕಲಬುರಗಿ:

ನಗರದ ಸಾಯಿ ಮಂದಿರ ಬಳಿಯಿರುವ ಅಪಾರ್ಟ್ಮೆಂಟ್ವೊಂದರ ಬಳಿ ಹಾಡುಹಗಲೇ ವಕೀಲರೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಈರಣ್ಣಾಗೌಡ ಪಾಟೀಲ್ (40) ಎಂಬ ವಕೀಲರ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಜಮೀನು ವಿವಾದದ ಹಿನ್ನೆಲೆಯಲ್ಲಿ ‌ಸಂಬಂಧಿಕರಿಂದಲೇ ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ವಿವಿ ಪೋಲಿಸ್ ಠಾಣೆ ಪೋಲಿಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!